ಲಾಯಿಲ: ಬಿಲ್ಲವ ಸಂಘದಿಂದ “ಕಂಡೊದ ಕಲೊಟ್ಟು ಬಿರ್ವೆರೆ ಗೊಬ್ಬು” ಕೆಸರು ಗದ್ದೆ ಕ್ರೀಡಾ ಕೂಟ

0

ಲಾಯಿಲ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಸೆ. 28ರಂದು ಲಾಯಿಲ ಹಂದೆವೂರು ಬೊಟ್ಟು ಎಂಬಲ್ಲಿ ಕಂಡೊದ
ಕಲೊಟ್ಟು ಬಿರ್ವೆರೆ ಗೊಬ್ಬು ಎಂಬ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ನಿರ್ದೇಶಕ ಕೃಷ್ಣಪ್ಪ ಪೂಜಾರಿ ಕೈಫ್ಲೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಓಟದ ಕೋಣಗಳನ್ನು ಗದ್ದೆಗೆ ಇಳಿಸಿ ಉಳುಮೆ ಮಾಡಿ ಕೋಳಿ ಅಂಕದ ಪ್ರಾತ್ಯಕ್ಷತೆ ನಡೆಯಿತು. ಹಿರಿಯರಾದ ದರ್ಖಾಸು ಸಂಜೀವ ಪೂಜಾರಿ ಗದ್ದೆಗೆ ಹಾಲು, ತುಪ್ಪ, ಎಳನೀರು ಹಾಕಿ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಸ್ಪರ್ಧೆಗಳು ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಸಮಿತಿ ಅಧ್ಯಕ್ಷ ಬಿ. ಲಕ್ಷ್ಮಣ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ., ಬೆಳ್ತಂಗಡಿ ಸುವರ್ಣ ಪ್ರತಿಷ್ಟಾನದ ಅಧ್ಯಕ್ಷ ಸಂಪತ್ ಸುವರ್ಣ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್, ತಾಲೂಕು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಯುವವಾಹಿನಿ ತಾಲೂಕು ಘಟಕದ ಅಧ್ಯಕ್ಷ ಗುರುರಾಜ ಗುರಿಪಳ್ಳ ಭಾಗವಹಿಸಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಸರಕಾರಿ ನೌಕರ ವಸಂತ ಸುವರ್ಣ, ತಾಲೂಕು ತುಳು ಒಕ್ಕೂಟದ ಅಧ್ಯಕ್ಷ ಶೈಲೇಶ್ ಆರ್. ಜೆ., ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.
ಗ್ರಾಮ ಸಮಿತಿ ಕಾರ್ಯದರ್ಶಿ ಸೌಮ್ಯ ಸ್ವಾಗತಿಸಿ, ಜಯಾನಂದ ಅಂಕಾಜೆ ಕಾರ್ಯಕ್ರಮ ನಿರೂಪಿಸಿದರು. ಸ್ನೇಕ್ ಅಶೋಕ ವಂದಿಸಿದರು.

LEAVE A REPLY

Please enter your comment!
Please enter your name here