ದ.ಕ. ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ ರತ್ನರಾಜ್ ಪೇರಂದಬೈಲ್ ಅವಿರೋಧ ಆಯ್ಕೆ

0

ಬೆಳ್ತಂಗಡಿ: ಪ್ರತಿಷ್ಠಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ ಉಭಯ ಜಿಲ್ಲೆಗಳ ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ರತ್ನರಾಜ್ ಪೇರಂದಬೈಲ್ ಬಳಂಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು ಕರಂಗಲಪಾಡಿ ಕೇಂದ್ರ ಸ್ಥಾನವಾಗಿ ಕಾರ್ಯಾಚರಣೆ ಮಾಡುತ್ತಿದ್ದು ಒಟ್ಟು 16 ನಿರ್ದೇಶಕರಿದ್ದಾರೆ. ರತ್ನರಾಜ್ ಜೈನ್ ರವರು ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯ ಎ ತರಗತಿ ಸದಸ್ಯರಿಂದ ಆಯ್ಕೆಯಾಗಿದ್ದಾರೆ ಎಂದು ಸಹಕಾರ ಸಂಘಗಳ ನಿಬಂಧಕ ತ್ರಿವೇಣಿ ರಾವ್ ಕೆ. ಘೋಷಣೆ ಮಾಡಿದ್ದಾರೆ. ಇವರು ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು‌‌ ಹಾಗೂ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here