Site icon Suddi Belthangady

ಬೆಳ್ತಂಗಡಿ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಅವರ ಸಲಹೆ ಸೂಚನೆಯ ಮೇರೆಗೆ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತ ರೋಡ್ರಿಗ್ರಸ್ ಅವರು ಗಾಂಧಿ ಭಾವಚಿತ್ರಕ್ಕೆ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ತದನಂತರ ಶಿಕ್ಷಕ ವೃಂದದವರು ಪುಷ್ಪ ನಮನವನ್ನು ಸಲ್ಲಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version