ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯ ಇಬ್ಬರು ಸಮಾಜಸೇವಕ ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ವಿಚಾರಣೆಗೆ ಬುಲಾವ್ ನೀಡಿದೆ.
ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಆಂಬುಲೆನ್ಸ್ ವಾಹನದಲ್ಲಿ ಸೇವೆ ಮಾಡುತ್ತಿರುವ ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಇಬ್ಬರಿಗೆ ಧರ್ಮಸ್ಥಳ ಗ್ರಾಮದಲ್ಲಿ ಯು.ಡಿ.ಆರ್. ಪ್ರಕರಣದಲ್ಲಿ ಪೊಲೀಸರ ಸಮ್ಮುಖದಲ್ಲಿ ಶವಗಾರಕ್ಕೆ ಸಾಗಿಸಿದ ಬಗ್ಗೆ ಹೇಳಿಕೆ ಪಡೆದುಕೊಳ್ಳಲು ಅ.4ರಂದು ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ.