ಶಿಶಿಲ: ಕೆಲ ದಿನಗಳ ಹಿಂದೆ ಹೃದಯ ಸಮಸ್ಯೆಯಿಂದ ಮೃತ ಪಟ್ಟಿದ್ದ ಬಾಲಕ ಅಶ್ವಿನ್ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮೃತ ಅಶ್ವಿನ್ ತಂದೆ ರಮೇಶ್ ಬೈರಕಟ್ಟ ಮತ್ತು ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಕೆ.ಎಂ., ಶಿಶಿಲೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ರಮೇಶ್, ಸ್ಥಳೀಯ ಕಾಂಗ್ರೆಸ್ ಮುಖಂಡ ಪುರುಷೋತ್ತಮ್, ವಿಶ್ವನಾಥ್ ಹಾಗೂ ಇತರರು ಉಪಸ್ಥಿತರಿದ್ದರು.