ನಾರಾವಿ: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

0

ನಾರಾವಿ: ಕುತ್ಲೂರು ಗ್ರಾಮದ ಮಂಜುಶ್ರೀ ನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್‌ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಪ್ರಕರಣ ವೇಣೂರು ಠಾಣೆಯಲ್ಲಿ ದಾಖಲಿಸಲಾಗಿದೆ.

ಮನೆಯವರು ಅ. 2ರಂದು ಮನೆಗೆ ಬೀಗ ಹಾಕಿ ಹೋಗಿದ್ದು, ಅ.6ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು ಅದರೊಳಗೆ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ, ಮುತ್ತಿನ ಸರ, ಚಿನ್ನದ ಬ್ರಾಸ್ ಲೈಟ್, ಮಕ್ಕಳ ಎರಡು ಸರಗಳು, ಒಂದು ಉಂಗುರ, ಒಂದು ಬಡೋಲೆ, ಚಿನ್ನದ ಉಂಗುರಗಳು ಸೇರಿದಂತೆ ಸುಮಾರು 149 ಗ್ರಾಂ. ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದು ಅದರ ಮೌಲ್ಯ ಸುಮಾರು 9,50,000 ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here