ಬೆಳ್ತಂಗಡಿ :ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅ. 10 ಹಾಗೂ 11ರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಬೆಥನಿ ವಿದ್ಯಾಲಯ ಪುತ್ತೂರು ತಂಡದೊಂದಿಗೆ ಇತ್ತೀಚೆಗೆ ವಿಟ್ಲ ದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಯಕ್ತಿಕವಾಗಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿದ್ದು, ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು
ವೈಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ” ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಇವರು ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದು, ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್ , ತರಬೇತುದಾರ ರಫೀಕ್ ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ಅಕ್ಷಯ್ ಮತ್ತು ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾರೆ.