ಬೆಳಾಲು: ಅನಂತೋಡಿ ದೇವಸ್ಥಾನದಲ್ಲಿ ಆಡಳಿತ ಮೊಕ್ತೇಸರ ಜೀವಂದರ ಕುಮಾರ್ ಜೈನ್ ರಿಗೆ ನುಡಿನಮನ

0

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನಿಧನರಾದ ದೇವಸ್ಥಾನದ ಆಡಳಿತ ಮೊಕ್ತೇಸರ ಬೆಳಾಲು ಗುತ್ತು ಜೀವಂದರ ಕುಮಾರ್ ಜೈನ್ ರವರಿಗೆ ದೇವಸ್ಥಾನದ ವತಿಯಿಂದ ನುಡಿ ನಮನ ಕಾರ್ಯಕ್ರಮ ಅ. 17ರಂದು ದೇವಸ್ಥಾನದಲ್ಲಿ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಸ್ಥಾನದ ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ನುಡಿನಮನ ಸಲ್ಲಿಸಿದರು. ಜೀವಂದರ್ ಕುಮಾರ್ ಅವರ ಪತ್ನಿ ಬೆಳಾಲು ಗುತ್ತು ಹೇಮಲತಾ, ಪುತ್ರ ವಿಕ್ರಮ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಜಾತ್ರೆ ಸಮಿತಿ ಸಂಚಾಲಕ ಲಿಂಗಪ್ಪ ಪೂಜಾರಿ ಬನಂದೂರು, ಮಹಿಳಾ ಸಮಿತಿ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ ಗೌಡ ಗಣಪನಗುತ್ತು, ಶ್ರೀ ಅನಂತೇಶ್ವರ ಭಜನಾ ಮಂಡಳಿ ಅಧ್ಯಕ್ಷ ಹರೀಶ್ ಪೋಸೊಟ್ಟು, ಉಪಸ್ಥಿತರಿದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಭಜನಾ ಮಂಡಳಿ ಸದಸ್ಯರು, ಬೈಲುವಾರು ಸಮಿತಿ ಸಂಚಾಲಕರು, ಸಹ ಸಂಚಾಲಕರು, ಭಕ್ತರು ಭಾಗವಹಿಸಿದ್ದರು. ದೇವರಿಗೆ ಪವಮಾನ ಕಲಶಾಭಿಷೇಕ, ರಾತ್ರಿ ರಂಗ ಪೂಜೆ ನಡೆಯಿತು. ವ್ಯವಸ್ಥಾಪಕ ಶಿವಪ್ರಸಾದ್ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here