ಬೆಳ್ತಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಚಿಕ್ಕಮಗಳೂರಿನ ತರಿಕೆರೆಯಲ್ಲಿ ಅ. 17 ಮತ್ತು18ರಂದು ನಡೆದ ರಾಜ್ಯಮಟ್ಟದ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದುಕೊಂಡು ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದರು.
ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರ.
ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾರೆ.