Site icon Suddi Belthangady

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ ವಿ. ನೆರಿಯ ಅವರ ಮನೆಗೆ ಭೇಟಿ

ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ.6ರಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಅವರ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೇಟಿ‌ ನೀಡಿ ಆರ್ಥಿಕ ಧನ ಸಹಾಯ ನೀಡಲಾಯಿತು.

ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೊಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷ ವಿಷ್ಣು ಮರಾಠೆ, ಬೆಳ್ತಂಗಡಿ ವಿ.ಹಿಂ.ಪ. ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version