Site icon Suddi Belthangady

ತಿಮರೋಡಿ ಮತ್ತು ಆಪ್ತರ ವಿರುದ್ಧ ಸುಳ್ಳು‌ಕೇಸ್ ಆರೋಪ-ತಹಶೀಲ್ದಾರ್ ಗೆ ಮನವಿ ನೀಡಲು ಬಂದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ -ಪ್ರಸನ್ನ ರವಿ ಆಕ್ರೋಶ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂಗೆ ಮನವಿ ನೀಡಲು ಆಗಮಿಸಿದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಅ.27ರಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನಿಲ್, ಪ್ರಜ್ವಲ್ ಕೆ.ವಿ. ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಇದಾದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಹೋರಾಟಗಾರ್ತಿ ಪ್ರಸನ್ನ ರವಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ಮನವಿ ನೀಡಲು ಕೂಡ ಅವಕಾಶ ಇಲ್ವಾ ಎಂದು ಪ್ರಶ್ನಿಸಿದರು.

Exit mobile version