


ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಮಾನ್ಯ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವರೇ ಸರಕಾರದ ಗಮನ ಸೆಳೆಯಲು ಕೋರಿ ಮನವಿ ಸಲ್ಲಿಸಲಾಯಿತು.


ಮನವಿಯಲ್ಲಿ ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ ತನ್ನದೇ ಪಾಲು ಹೊಂದಿರುವ ರಬ್ಬರು ಹಿಂದೆ ಸರಕಾರ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹ ನೀಡಿದ್ದ ರಬ್ಬರು ಬೆಳೆಯ ವಿಸ್ತೀರ್ಣ ಕಡಿಮೆಯಾಗುತ್ತಿರುವುದು, ಅವಲಂಬಿತ ಕೃಷಿಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರಲು ಕಾರಣಗಳ ಬಗ್ಗೆ ವಿವರಿಸಲಾಗಿದೆ. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು. ಎಂದು ವೇದಿಕೆಯ ಅಧ್ಯಕ್ಷ ಶ್ರೀಧರ ಜಿ. ಭಿಡೆ ತಿಳಿಸಿದರು. ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಉಪಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಗೋಪಾಲಕೃಷ್ಣ ಭಟ್, ಕೃಪಾ, ಸಂಯೋಜಕ ಅನಂತ ಭಟ್ ಎಂ., ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ.ಎ. ಶಿಬಾಜೆ ಉಪಸ್ಥಿತರಿದ್ದರು.


            






