Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ. 5ಲಕ್ಷ ಹಸ್ತಾಂತರ

ಬೆಳ್ತಂಗಡಿ: ಶ್ರೀ ಅನಂತೇಶ್ವರ ಸ್ವಾಮಿ ದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರ ಹರ್ಷ ಸಂಪಿಗೆತ್ತಾಯ ಅವರಿಗೆ ರೂ. 5 ಲಕ್ಷ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ ಡಿ. ಅವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ವಿಭಾಗದ ಯೋಜನಾಧಿಕಾರಿ ಅಶೋಕ ಬಿ., ವಲಯ ಅಧ್ಯಕ್ಷ ಜಯ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಗೋಪಾಲ ಪೂಜಾರಿ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಸುಧಾ, ಗಣ್ಯರಾದ ಡಾ.ಕೆ.ಎಂ. ಶೆಟ್ಟಿ ಬಳ್ಳಮಂಜ, ವಲಯ ಮೇಲ್ವಿಚಾರಕ ಕೇಶವ ನಾಯ್ಕ, ಸೇವಾಪ್ರತಿನಿಧಿಗಳಾದ ಪರಮೇಶ್ವರ ಮಚ್ಚಿನ, ನಂದಿನಿ ಮತ್ತು ಊರಿನ ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version