ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಕಾರಿನಲ್ಲಿ ಮೂರು ದನದ ಕರುಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣಾ ಪೊಲೀಸರು ಎರಡು ಆರೋಪಿಯ ಮನೆಯನ್ನು ಮುಟ್ಟುಗೋಲು ಹಾಕಿದ್ದಾರೆ. ಇದೀಗ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೋಹಾರ (35) ಮನೆಯಲ್ಲಿ ದನವನ್ನು ಖರೀದಿಸಿ ನಂತರ ಗೋಮಾಂಸಕ್ಕಾಗಿ ಇತರರಿಗೆ ಮಾರಾಟ ಮಾಡಲಾಗುತ್ತಿದ್ದರು ಎಂಬ ಹಿನ್ನೆಲೆಯಲ್ಲಿ ಮನೆಯನ್ನು ಮುಟ್ಟುಗೋಲು ಹಾಕಲಾಗಿದೆ.
ಮನೆಯನ್ನು ಮುಟ್ಟುಗೋಲು ಹಾಕುವುದಕ್ಕೆ ಪೊಲೀಸರು ಸಹಾಯಕ ಕಮಿಷನರ್ ಅವರಿಗೆ ವಿನಂತಿಸಿದ್ದರು. ನ. 6ರಂದು ಅವರ ಆದೇಶದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ಅವರ ನೇತೃತ್ವದಲ್ಲಿ ಮುಟ್ಟುಗೋಲು ಕಾರ್ಯ ನಡೆಸಲಾಗಿದೆ.

