Site icon Suddi Belthangady

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ- ಕರ್ನಾಟಕ ತಂಡದ ತರಬೇತಿಗೆ ಶಶಿಕಾಂತ್ ಸುಲ್ಕೇರಿ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು, ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ, ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆಗಾಗಿ ನಡೆಸುವ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ. ಸುಲ್ಕೇರಿ ಶ್ರೀರಾಮ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿ. ಸುಲ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ಅವರ ಪುತ್ರ.

Exit mobile version