




ಬೆಳ್ತಂಗಡಿ: ಇತ್ತೀಚೆಗೆ ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ನಾವೂರು ಗ್ರಾಮದ ತನ್ವಿತ್ ಅವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೋರ್ತಾಜೆ, ಬಿಜೆಪಿ ದ.ಕ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು, ಶಕ್ತಿಕೇಂದ್ರ ಅಧ್ಯಕ್ಷ ಪ್ರದೀಪ್, ಮಂಡಲ ಕಾರ್ಯದರ್ಶಿ ವೇದಾವತಿ, ಗ್ರಾ.ಪಂ. ಸದಸ್ಯೆ ಪ್ರಿಯ ಲಕ್ಷ್ಮಣ ಉಪಸ್ಥಿತರಿದ್ದರು.









