




ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿಯೋನ್ ಆಶ್ರಮಕ್ಕೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಆಹಾರ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಆಶ್ರಮನಿವಾಸಿಗಳಿಗೆ ಸಿಹಿ ಹಂಚಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಸುರೇಶ್ ರವರು ಮಾತನಾಡಿ, ಪೂಜ್ಯ ಹೆಗ್ಗಡೆಯವರ ಮಾನವಸೇವೆ ಮತ್ತು ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಸ್ಪೂರ್ತಿದಾಯಕವೆಂದು ಹೇಳಿದರು. ಸಿಯೋನ್ ಆಶ್ರಮದೊಂದಿಗೆ ಇರುವ ಬಾಂಧವ್ಯವನ್ನು ಸ್ಮರಿಸಿಕೊಂಡ ಅವರು, ಆಶ್ರಮದ ಸೇವಾ ಚಟುವಟಿಕೆಗಳನ್ನು ಪ್ರಶಂಸಿಸಿದರು.



ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ. ಯು.ಸಿ. ಪೌಲೋಸ್ ರವರು ‘ಪೂಜ್ಯರ ಸೇವಾಧರ್ಮ ಮತ್ತು ಸಮಾಜೋದ್ಧಾರದ ಕಾರ್ಯವೈಖರಿಯನ್ನು ಸಂಕ್ಷಿಪ್ತವಾಗಿ ವಿವರಿಸಿ, ಶ್ರೀ ಕ್ಷೇತ್ರದಿಂದ ದೊರೆಯುತ್ತಿರುವ ಸಹಕಾರವು ಆಶ್ರಮದ ಸೇವಾ ಕಾರ್ಯಗಳಿಗೆ ಬಲವರ್ಧಕವಾಗಿದೆ’ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಮಂಜುನಾಥ, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ, ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಅಮೃತ, ಜನಜಾಗೃತಿ ಮಾಜಿ ಅಧ್ಯಕ್ಷ ಡಿ.ರಹಿಮಾನ್, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಮುಂಡಾಜೆ ವಲಯ ಮೇಲ್ವಿಚಾರಕ ಗಣೇಶ್, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸಿಯೋನ್ ಆಶ್ರಮದ ಸಿಬ್ಬಂದಿಗಳು, ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಿಯೋನ್ ಸಿಬ್ಬಂದಿ ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು.









