






ಶಿಬಾಜೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೆರ್ಲ ಒಕ್ಕೂಟದ ಸದಸ್ಯರ ವತಿಯಿಂದ ಮಹಾಪೂಜೆಯನ್ನು ನೆರವೇರಿಸಿದರು. ಒಕ್ಕೂಟದ ಅಧ್ಯಕ್ಷ ಅಣ್ಣುಗೌಡ, ಒಕ್ಕೂಟದ ಪದಾಧಿಕಾರಿಗಳು, ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಆಡಳಿತ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ತಂಡದ ಸದಸ್ಯರು, ಅರಸಿನಮಕ್ಕಿ ವಲಯ ಮೇಲ್ವಿಚಾರಕರಕಿ ಶಶಿಕಲಾ, ಜನಜಾಗೃತಿ ವೇದಿಕೆಯ ಚೆನ್ನಪ್ಪ ಗೌಡ, ಸೇವಾ ಪ್ರತಿನಿಧಿಗಳಾದ ಅರುಣಾ ಗಣೇಶ್, ಯೋಗೀಶ್ ಬೆಂಗಳ, ಸಿ.ಎಸ್. ಸೇವಾದಾರರಾದ ದಿವ್ಯ ಉಪಸ್ಥಿತರಿದ್ದರು.









