ರವಿ ಬಿ.ಎಸ್. ಬೆಳ್ತಂಗಡಿ ವೃತ್ತ ನಿರೀಕ್ಷಕ

0

ಬೆಳ್ತಂಗಡಿ: ಧರ್ಮಸ್ಥಳ, ಪುಂಜಾಲಕಟ್ಟೆ ಮತ್ತು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್. ನೇಮಕಗೊಂಡಿದ್ದಾರೆ. ವೃತ್ತ ನಿರೀಕ್ಷಕರಾಗಿದ್ದ ನಾಗೇಶ್ ಕದ್ರಿ ಅವರು ನಿವೃತ್ತರಾದ ನಂತರ ಖಾಲಿ ಇದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರ ಹುದ್ದೆಗೆ ರವಿ ಬಿ.ಎಸ್. ಅವರನ್ನು ನೇಮಕ ಮಾಡಲಾಗಿದೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್. ಅವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು.

ಈ ವರ್ಗಾವಣೆ ಆದೇಶವನ್ನು ಮಾರ್ಪಾಡುಗೊಳಿಸಲಾಗಿದ್ದು ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ನ.೨೧ರಂದು ಆದೇಶ ಹೊರಡಿಸಲಾಗಿದೆ. ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಕರ್ತವ್ಯ ನಿರ್ವಹಿಸಿದ್ದ ರವಿ ಅವರು ಬಳಿಕ ಚಿಕ್ಕಮಗಳೂರು, ಕಾರ್ಕಳ, ಸುಳ್ಯ, ಮತ್ತು ಪುತ್ತೂರು ಗ್ರಾಮಾಂತರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಇನ್ಸ್‌ಪೆಕ್ಟರಾಗಿ ಭಡ್ತಿ ಪಡೆದು ಶೃಂಗೇರಿ ಮತ್ತು ಪುತ್ತೂರು ಗ್ರಾಮಾಂತರದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ತಮ್ಮ ಉತ್ತಮ ಕರ್ತವ್ಯ ನಿರ್ವಹಣೆಗಾಗಿ ಮುಖ್ಯಮಂತ್ರಿ ಪದಕ, ರಾಷ್ಟ್ರಪತಿ ಪದಕ ಸೇರಿದಂತೆ ವಿವಿಧ ಪ್ರಶಸ್ತಿ ಪುರಸ್ಕೃತರಾಗಿರುವ ರವಿ ಅವರು ಸೈಬರ್ ಕ್ರೈಮ್‌ಗಳನ್ನು ಪತ್ತೆ ಹಚ್ಚುವುದರಲ್ಲಿ ನಿಷ್ಣಾತರಾಗಿದ್ದಾರೆ. ರವಿ ಬಿ.ಎಸ್. ಬೆಳ್ತಂಗಡಿ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಸುಬ್ಬಾಪುರ ಮಠ್ ಅವರು ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿ ಪ್ರಭಾರ ಕರ್ತವ್ಯದಲ್ಲಿದ್ದಾರೆ.

LEAVE A REPLY

Please enter your comment!
Please enter your name here