Site icon Suddi Belthangady

ಬೆಳ್ತಂಗಡಿ: ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಬೆಂಗಳೂರು ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಮತ್ತು ತರಬೇತಿಯನ್ನು ಬೆಳ್ತಂಗಡಿ ಸಾನ್ ತೋಮ್ ಟವರ್ ನಲ್ಲಿ ಡಿ. 2ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ವಹಿಸಿದ್ದರು. ಹಿಂದಿನ ಸಭೆಯ ವರದಿಯನ್ನು ಮತ್ತು ಪ್ರಸ್ತುತ ವರ್ಷದಲ್ಲಿ ನಡೆಸಿದ ಕೆಲಸ ಕಾರ್ಯಗಳ ವರದಿಯನ್ನು ಸ್ನೇಹ ಜ್ಯೋತಿ ಒಕ್ಕೂಟದ ಜೊತೆ ಕಾರ್ಯದರ್ಶಿ ಉಷಾರವರು ಮಂಡಿಸಿದರು. 2024-2025 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಸ್ನೇಹ ಜ್ಯೋತಿ ಒಕ್ಕೂಟದ ಖಜಾಂಚಿ ಎಲಿಯಮ್ಮ ತೋಮಸ್ ಮಂಡಿಸಿದರು.

ಹಿಂದಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಫಾದರ್ ಜೋಸ್ ಆಯಾಂಕುಡಿ ಅವರು ಧರ್ಮ ಗುರುಗಳಾಗಿ 25 ವರ್ಷ ಪೂರೈಸಿದ ನೆನಪಿಗಾಗಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜೀವ ವಿಮಾ ಅಭಿವೃದ್ಧಿ ಅಧಿಕಾರಿ ವಿನ್ಸೆಂಟ್ ಡಿಸೋಜ ಅವರು ಜೀವ ವಿಮೆ, ವಾಹನ ವಿಮೆ, ಆರೋಗ್ಯ ವಿಮೆ ಮತ್ತು ಅಪಘಾತ ವಿಮಾ ಸೌಲಭ್ಯಗಳ ಬಗ್ಗೆ ತರಬೇತಿ ನೀಡಿದರು. ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕ ಫಾ.ಬಿನೋಯಿ ಎ.ಜೆ. ರವರು ಒಕ್ಕೂಟದ ಬಲವರ್ಧನೆಗಾಗಿ ಪ್ರತಿಯೊಬ್ಬ ಸದಸ್ಯರು ಜವಾಬ್ದಾರಿಯುತವಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಗಂಡಿಬಾಗಿಲು ಉದಯ ಮಹಾಸಂಘದ ಕಾರ್ಯದರ್ಶಿ ಮಿನಿ ಎಲ್ಲರನ್ನು ಸ್ವಾಗತಿಸಿದರು. ಅರುಣೋದಯ ಮಹಾ ಸಂಘದ ಸದಸ್ಯರು ಪ್ರಾರ್ಥನೆಯನ್ನು ಹಾಡಿದರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಅರುಣೋದಯ ಮಹಾಸಂಘದ ಸದಸ್ಯೆ ಸಾಲಿ ವಂದಿಸಿದರು.

Exit mobile version