ಡಿ. 4: ಸೇವಾಭಾರತಿಯ ಕಾರ್ಯಾಲಯ ‘ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ-ಪತ್ರಿಕಾಗೋಷ್ಠಿ

0

ಕನ್ಯಾಡಿ: ಎಂ.ಆರ್.ಪಿ.ಎಲ್. ನ ಸಿ.ಎಸ್. ಆರ್. ಅನುದಾನದಲ್ಲಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಡಿ. 4ರಂದು ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಜರಗಲಿದೆ ಎಂದು ಸೇವಾ ಭಾರತಿ ಸೇವಾಧಾಮದ ಸಂಸ್ಥಾಪಕ ಕೆ‌ ವಿನಾಯಕ ರಾವ್ ಹೇಳಿದರು. ಅವರು ಡಿ.2ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಆರ್.ಎಸ್.ಎಸ್. ಸಹಕಾರ್ಯನಿರ್ವಾಹಕ ಮುಕುಂದ್ ಸಿ.ಆರ್. ಉದ್ಘಾಟನಾ ಕಾರ್ಯಕ್ರಮ ನೆರವೇರಿಸುವರು. ಸೇವಾ ಭಾರತಿಯ ಅಧ್ಯಕ್ಷೆ ಸ್ವರ್ಣಗೌರಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಆರ್. ಎಸ್. ಎಸ್. ನ ಪ್ರಾಂತ ಸಹಸಯೋಜಕ ಸುಬ್ರಾಯ ನಂದೋಡಿ ವಾರ್ಷಿಕ ವರದಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪೋಸ್ಟರ್ ಬಿಡುಗಡೆಗೊಳಿಸುವರು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಎಂ.ಎಲ್‌.ಸಿ. ಗಳಾದ ಪ್ರತಾಪಸಿಂಹ ನಾಯಕ್, ಡಾ.ಧನಂಜಯ ಸರ್ಜಿ, ಎಂ.ಆರ್.ಪಿ.ಎಲ್. ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಪುತ್ತೂರು ಜಿಲ್ಲೆ ಜಿಲ್ಲಾ ಸಂಘಚಾಲಕ ಕೆ.ವಿನಯ ಚಂದ್ರ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಂಗಳೂರು ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯ ಎಂ.ಡಿ. ರಾಜೇಶ್ ಫಡಕೆ, ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಎಂ.ಡಿ. ಡಾ. ಗೋಪಾಲಕೃಷ್ಣ ಕೆ., ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಕೃಷ್ಣ ಭಟ್ , ಮುಂಬೈಯ ಕ್ಯಾಪ್ರಿಕಾರ್ನ್ ಅಗ್ರಿಫಾರ್ಮರ್ಸ್ ಡೆವಲಪರ್ಸ್ ನ ಚೀಫ್ ಅಕೌಂಟೆಂಟ್ ಕೆ. ವಿಷ್ಣುಮೂರ್ತಿ ರಾವ್, ಸೇವಾಧಾಮದ ಸಂಚಾಲಕ ಕೆ.ಪುರಂದರ ರಾವ್, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿಯ ಅಧ್ಯಕ್ಷೆ ಮಮತಾ, ಸೇವಾಭಾರತಿ ಆರೋಗ್ಯ ಯೋಜನೆಯ ಸಂಚಾಲಕ ಅಖಿಲೇಶ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಈವರೆಗೆ ಅಧ್ಯಕ್ಷರಾಗಿ ಜವಾಬ್ದಾರಿಯಲ್ಲಿದ್ದವರಿಗೆ, ಸೇವಾನಿಕೇತನ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ, ಎರಡು ವರ್ಷಗಳಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆನ್ಲೈನ್ ನಲ್ಲಿ ಭಗವದ್ಗೀತೆ ಅಭ್ಯಾಸ ಮಾಡಿಸಿದ ಗುರುಗಳಿಗೆ ಗೌರವಾರ್ಪಣೆ, ಬೆನ್ನುಹುರಿ ಅಪಘಾತ ಮತ್ತು ನಿರ್ವಹಣೆ ಜಾಗೃತಿಗಾಗಿ ತಯಾರಿಸಿದ ಪೋಸ್ಟರ್ ಬಿಡುಗಡೆ ಹಾಗೂ ಇತರ ಕಾರ್ಯಕ್ರಮಗಳು ಜರಗಲಿವೆ.
ಅಧ್ಯಕ್ಷೆ ಸ್ವರ್ಣಗೌರಿ, ಟ್ರಸ್ಟಿ ಜೈ ರಾಜ್ ಸಾಲಿಯಾನ್ ಹಾಗೂ ಸುದರ್ಶನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here