Site icon Suddi Belthangady

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್. ಹಾಗೂ ಬೆಂಗಳೂರು ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಬೆಂಗಳೂರು ಕ್ರಾಸ್ ಸಂಸ್ಥೆ ಹಾಗೂ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್. ನ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಡಿ. 9ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಆಯೋಜಿಸಿಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಹಾಗೂ ಬೆಳ್ತಂಗಡಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ಅವರು ವಹಿಸಿದ್ದರು.

ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕ ಸಿಸ್ಟರ್. ನ್ಯಾನ್ಸಿ ಲೋಬೊರವರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶಿವಮೊಗ್ಗ ಎಸ್.ಎಮ್.ಎಸ್.ಎಸ್ ಸಂಸ್ಥೆಯ ಯೋಜನಾ ಸಂಯೋಜಕ ಜಗದೀಶ್ ರವರು ಒಕ್ಕೂಟಗಳ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ನೀಡಿದರು. ಮಂಗಳೂರು ಸಿ.ಒ.ಡಿ.ಪಿ ಸೀಮಾ ಮಥಾಯಸ್, ಉಡುಪಿ ಸಂಪದ ಮರೀನಾ ಲುವಿಸ್, ಪುತ್ತೂರು ಕಿಡ್ಸ್ ನ ಸರಸ್ವತಿ ಹಾಗೂ ರಾಜೇಶ್ವರಿ, ಕಾರವಾರ ಕೆ.ಡಿ.ಡಿ.ಎಸ್. ನ ಒಕ್ಕೂಟ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತ ಮಾರ್ಕ್ ಡಿಸೋಜ ಎಲ್ಲರನ್ನು ಸ್ವಾಗತಿಸಿದರು. ಸಂಯೋಜಕಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 36 ಮಂದಿ ಭಾಗವಹಿಸಿದ್ದರು. ಮಂಜುಳಾರವರು ವಂದಿಸಿದರು.

Exit mobile version